ಬೆಳಗಾವಿ: ಶಾಲೆಯಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ನೀರಿನ ಟ್ಯಾಂಕ್ ಗೆ ಅಪರಿಚಿತ ವ್ಯಕ್ತಿಗಳು ಕೀಟನಾಶಕ ಬೆರೆಸಿರುವುದು ದೃಢವಾಗಿದೆ. ಇಂದು ಬೆಳಗ್ಗಿನ ಜಾವ 6 ಗಂಟೆಯ ಸುಮಾರಿಗೆ ಟ್ಯಾಂಕ್ನಲ್ಲಿ ನೀರು ಸಂಗ್ರಹಿಸಲಾಗಿದೆ.
ಇದೇ ಟ್ಯಾಂಕಿನ ಮೂಲಕ ನೀರು ಸಂಗ್ರಹ ಮಾಡಲಾಗಿದೆ. ಆ ಬಳಿಕವೇ ಕಿಡಿಗೇಡಿಗಳು ಕೀಟನಾಶಕ ಬೆರೆಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನೀರು ಕುಡಿದ ತಕ್ಷಣ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೇ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಅವರು ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದಾರೆ.




