Ad imageAd image
- Advertisement -  - Advertisement -  - Advertisement - 

ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನ ಅಸ್ವಸ್ಥ

Bharath Vaibhav
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನ ಅಸ್ವಸ್ಥ
WhatsApp Group Join Now
Telegram Group Join Now

ಹಾಸನ : ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

ಕೂಡಲೇ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಇನ್ನು ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು.

ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿ, ಸಿಡಿಲು ಬಡಿದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಗಾಯವಾಗಿದ್ದು, ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

WhatsApp Group Join Now
Telegram Group Join Now
Share This Article
error: Content is protected !!