ಬೆಂಗಳೂರು: ಸಿದ್ದರಾಮಯ್ಯ ಟಾರ್ಗೆಟ್ ಫಿಕ್ಸ್ ಆಗಿದೆ; ಕರ್ನಾಟಕದ ಬೊಕ್ಕಸ ಬರಿದಾಗಿದೆ. ಇದು ಡಿನ್ನರ್ ರಾಜಕೀಯದ ಕಾರ್ಯಸೂಚಿ ಎಂದು ಆರ್. ಅಶೋಕ್ ಅವರು ಆರೋಪಿಸಿದರು.
ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ.
ಇಲಾಖೆ ಭಾರದನ್ವಯ ಕೋಟಿ ಕೋಟಿ ಕೊಟ್ಟರೆ ನೀವು ಡಿಸೆಂಬರ್ನಲ್ಲಿ ಸಚಿವರಾಗಿ ಇರುತ್ತೀರಿ; ಇಲ್ಲವಾದರೆ, ಜನವರಿಯಲ್ಲಿ ನೀವು ಇರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ್ದಾರೆ ಎಂದರು.
ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಕಿರಣ್ ಮಜುಂದಾರ್ ಅವರು ಟ್ವೀಟ್ ಮಾಡಿದ್ದಾರೆ. ಚೀನಾದ ಕಂಪೆನಿಯು ರಸ್ತೆಯ ಪರಿಸ್ಥಿತಿ ಕೆಟ್ಟದಾಗಿ ಇರುವ ಕುರಿತು ಕಸದ ರಾಶಿ ಬಗ್ಗೆ ತಿಳಿಸಿ, ಹೂಡಿಕೆ ಬೇಡವೇ ಎಂದು ಕೇಳಿದೆ ಎಂದು ಪ್ರಸ್ತಾಪಿಸಿದ್ದಾರೆ ಎಂದು ಗಮನಕ್ಕೆ ತಂದರು. ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಎಂದು ಕೇಳಿದರು.
ಮೋಹನ್ದಾಸ್ ಪೈ ಅವರು ಲಂಚಗುಳಿತನದ ಕುರಿತು ಪ್ರಸ್ತಾಪಿಸಿದ್ದರು ಎಂದು ವಿವರಿಸಿದರು. ಬ್ಲಾಕ್ ಬಗ್ಸ್ ಇಷ್ಟವಿದ್ದರೆ ಇರಲಿ; ಇಲ್ಲವಾದರೆ ಔಟ್ ಎಂದು ಅಶ್ವತ್ಥನಾರಾಯಣ್ ಫ್ರೆಂಡ್ ಹೇಳಿದ್ದರು. ಅದಕ್ಕೆ ಅವರನ್ನು ಮೆಚ್ಚಬೇಕು ಎಂದು ವ್ಯಂಗ್ಯವಾಡಿದರು.
ಆರೆಸ್ಸೆಸ್ ಚಟುವಟಿಕೆ ನಿಷೇಧ ಕುರಿತ ಪ್ರಿಯಾಂಕ್ ಅವರ ಪತ್ರದ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಮಲ್ಲಿಕಾರ್ಜುನ ಖರ್ಗೆಯವರು ಆರೆಸ್ಸೆಸ್ ಕಾರ್ಯಕ್ರಮಕ್ಕೆ ಯಾಕೆ ಹೋದರೆಂದು ಪ್ರಿಯಾಂಕ್ ಅವರು, ಅವರ ಅಪ್ಪನನ್ನು ಕೇಳಲಿ ಎಂದು ಸವಾಲು ಹಾಕಿದರು.




