Ad imageAd image

ಬೆಳೆಹಾನಿಗೆ ಪ್ರತಿ ಹೆಕ್ಟೇರ್‌ಗೆ 31 ಸಾವಿರ ರೂಪಾಯಿ ಪರಿಹಾರ : ಸಂಪುಟ ಸಭೆಯಲ್ಲಿ ತೀರ್ಮಾನ

Bharath Vaibhav
ಬೆಳೆಹಾನಿಗೆ ಪ್ರತಿ ಹೆಕ್ಟೇರ್‌ಗೆ 31 ಸಾವಿರ ರೂಪಾಯಿ ಪರಿಹಾರ : ಸಂಪುಟ ಸಭೆಯಲ್ಲಿ ತೀರ್ಮಾನ
WhatsApp Group Join Now
Telegram Group Join Now

ಬೆಂಗಳೂರು: ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ ವಿತರಣೆಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಳೆಯಾಶ್ರಿತ ಬೆಳೆಗೆ ಎಸ್‌ಡಿಆರ್‌ಎಫ್‌/ ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಪ್ರತಿ ಹೆಕ್ಟೇರ್‌ಗೆ 8,500 ರೂ.ಪರಿಹಾರ ಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.8,500 ಪರಿಹಾರ ಸೇರಿ ಒಟ್ಟು 17,000 ರೂ. ನೀಡಲಾಗುವುದು.

ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ರೂ.17,000 ಪರಿಹಾರ ಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ಸೇರಿ ಒಟ್ಟು 25,500 ರೂ. ನೀಡಲಾಗುವುದು.

ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 22,500 ರೂ. ಪರಿಹಾರ ಧನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.8,500 ಪರಿಹಾರ ಸೇರಿ ಒಟ್ಟು ರೂ.31,000 ನಿಗದಿಗೊಳಿಸಿ ವಿತರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!