Ad imageAd image

ಎತ್ತಿನಹೊಳೆ ಕಾರ್ಯಕ್ರಮಕ್ಕೆ ಕರೆದೊಯ್ಯುತ್ತಿದ್ದ ವಾಹನ ಅಪಘಾತ : 7 ಪತ್ರಕರ್ತರಿಗೆ ಗಾಯ

Bharath Vaibhav
ಎತ್ತಿನಹೊಳೆ ಕಾರ್ಯಕ್ರಮಕ್ಕೆ ಕರೆದೊಯ್ಯುತ್ತಿದ್ದ ವಾಹನ ಅಪಘಾತ : 7 ಪತ್ರಕರ್ತರಿಗೆ ಗಾಯ
ACCIDENT
WhatsApp Group Join Now
Telegram Group Join Now

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ವಾರ್ತಾ ಇಲಾಖೆ ವತಿಯಿಂದ ಪತ್ರಕರ್ತರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಾಹನ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆದ ವಾಹನ ಲಾರಿಗೆ ಡಿಕ್ಕಿ ಹೊಡೆದಿದೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ 7 ಜನ ಪತ್ರಕರ್ತರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!