Ad imageAd image

9 ವಿಶ್ವವಿದ್ಯಾಲಯ ಮುಚ್ಚಲು ಸಂಪುಟದ ತೀರ್ಮಾನ: ಖಂಡನೆ

Bharath Vaibhav
9 ವಿಶ್ವವಿದ್ಯಾಲಯ ಮುಚ್ಚಲು ಸಂಪುಟದ ತೀರ್ಮಾನ: ಖಂಡನೆ
WhatsApp Group Join Now
Telegram Group Join Now

ಮುದಗಲ್ಲ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟೆ ಉಪ ಸಮಿತಿ- ತಿರ್ಮಾನಿಸಿದ್ದು ಮುದಗಲ್ಲ ನ ಮಾನವ ಬಂದುತ್ವ ವೇದಿಕೆಯ ಸಂಚಾಲಕರಾದ ಸಂಜೀವ ಚಲುವಾದಿ ಖಂಡಿಸಿದ್ದಾರೆ.

ಈ ಬಗ್ಗೆ ಮಾತನಾಡಿ, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ ಹತ್ತು ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬೀದರ ವಿಶ್ವವಿದ್ಯಾಲಯವನ್ನು ಮಾತ್ರ ಉಳಿಸಿಕೊಳ್ಳಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಅಧ್ಯಕ್ಷತೆಯ ಉಪ ಸಮಿತಿ ತೀರ್ಮಾನ ಕೈಗೊಂಡಿದ್ದು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಸಭೆ ನಡೆಯಿತು.

ಸಭೆಯಲ್ಲಿ ಬೀದರ ವಿಶ್ವವಿದ್ಯಾಲಯ ಹೊರತುಪಡಿಸಿ ಕೊಡಗು ವಿಶ್ವವಿದ್ಯಾಲಯ ಸೇರಿ ರಾಜ್ಯದ ಎಲ್ಲಾ ಹೊಸ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ತಿರ್ಮಾನಕೈಗೊಳ್ಳಲಾಗಿದೆ.

ಕೊಡಗು, ಹಾಸನ, ಚಾಮರಾಜನಗರ, ಹಾವೇರಿ, ಕೊಪ್ಪಳ,ಬಾಗಲಕೋಟೆ,ಮಹಾರಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳುವ ಸಾಧ್ಯತೆ ಇದ್ದು.

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಸರ್ಕಾರ ತೆಗೆದುಕೊಂಡಿರುವಂತಹ ನಿರ್ಧಾರ ವಾಪಸ್ ಪಡೆಯಬೇಕು ಹಾಗೂ ರಾಜ್ಯದ ಜನರ ಹಿತವನ್ನು ಅರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವರದಿ: ಮಂಜುನಾಥ ಕುಂಬಾರ

WhatsApp Group Join Now
Telegram Group Join Now
Share This Article
error: Content is protected !!