Ad imageAd image

SAD NEWS : ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ಗೆ ಬಲಿ

Bharath Vaibhav
SAD NEWS : ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ಗೆ ಬಲಿ
WhatsApp Group Join Now
Telegram Group Join Now

ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಬೆಂಗಳೂರಿನ ಬನಶಂಕರಿಯಲ್ಲಿನ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮಸಣದ ಹೂ, ಇನ್ಸ್ ಪೆಕ್ಟರ್ ವಿಕ್ರಂ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಂತ ಅಪರ್ಣಾ, ಆ ಬಳಿಕ ಕಿರುತೆರೆಯ ಧಾರವಾಹಿಗಳು, ರಿಯಾಲಿಟಿ ಶೋ ಗಳಲ್ಲಿ ನಿರೂಪಕಿಯಾಗಿ ತೊಡಗಿಸಿಕೊಂಡು, ಖ್ಯಾತಿಯನ್ನು ಪಡೆದಿದ್ದರು.ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು.

ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!