Ad imageAd image

ಇನ್ಮುಂದೆ ಹಣ ಬದಲು ಅಕ್ಕಿ ವಿತರಣೆ 

Bharath Vaibhav
ಇನ್ಮುಂದೆ ಹಣ ಬದಲು ಅಕ್ಕಿ ವಿತರಣೆ 
WhatsApp Group Join Now
Telegram Group Join Now

ನವದೆಹಲಿ: ರಾಜ್ಯದ ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿ ನೀಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾಜ್ಯದ ಪಡಿತರ ಫಲಾನುಭವಿಗಳೆಗೆ ವಿತರಿಸಲು ಬೇಕಾದ ಅಕ್ಕಿಯ ಪ್ರಮಾಣದ ಕುರಿತಾಗಿ ಚರ್ಚೆ ನಡೆಸಲಾಗಿದ್ದು, ಅಗತ್ಯವಿರುವ ಅಕ್ಕಿ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಂಗಳವಾರ ಕೇಂದ್ರ ಸಚಿವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಈಗಾಗಲೇ ಕೇಂದ್ರ ಸರ್ಕಾರ ರಾಜ್ಯದ 4 ಕೋಟಿ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ವಿತರಿಸುತ್ತಿದೆ. ಉಳಿದ ಹೆಚ್ಚುವರಿ 13 ಲಕ್ಷ ಬಿಪಿಎಲ್ ಕಾರ್ಡ್ ನ 40 ರಿಂದ 50 ಲಕ್ಷ ಮಂದಿಗೆ ರಾಜ್ಯವೇ ಅಕ್ಕಿ ವಿತರಿಸುತ್ತಿದ್ದು, ಇದಕ್ಕಾಗಿ ಕೆಜಿ ಅಕ್ಕಿಗೆ 34 ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೇಂದ್ರವು ಕೆಜಿಗೆ 28 ರೂಪಾಯಿಗೆ ಅಕ್ಕಿ ನೀಡಲು ಮುಂದೆ ಬಂದಿದ್ದು, ಇನ್ನು ಮುಂದೆ ನೇರವಾಗಿ ಕೇಂದ್ರದಿಂದ ಖರೀದಿಸಲಾಗುವುದು. ರಾಜ್ಯದ ಬಿಪಿಎಲ್ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಕಿ ವಿತರಿಸಲು ಪ್ರತಿ ತಿಂಗಳಿಗೆ 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ಮುಖ್ಯಮಂತ್ರಿಗಳು, ಅಧಿಕಾರಿಗಳೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!