Ad imageAd image

ಮೊನ್ನೆ ಮಾನ್ವಿ ತಾಲೂಕಿನಲ್ಲಿ ಆಗಿರುವ ಘಟನೆ ನಾಳೆ ಸೇಡಂ ನಲ್ಲಿ ಆಗಬಹುದು: ಶೇಖರ್ ಸೇಡಂ ಆಕ್ರೋಶ.

Bharath Vaibhav
ಮೊನ್ನೆ ಮಾನ್ವಿ ತಾಲೂಕಿನಲ್ಲಿ ಆಗಿರುವ ಘಟನೆ ನಾಳೆ ಸೇಡಂ ನಲ್ಲಿ ಆಗಬಹುದು: ಶೇಖರ್ ಸೇಡಂ ಆಕ್ರೋಶ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ಸೇಡಂ-ಚಿಂಚೋಳಿ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ರಸ್ತೆ ಗೊಂಡಿಮಯವಾಗಿದೆ.ಸಂಚಾರಕ್ಕೆ ಬಹಳ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು.ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರಿ ಗಾತ್ರದ ಗುಂಡಿಗಳು ಬಿದ್ದಿವೆ.ಗುಂಡಿಯಲ್ಲಿ ಮಳೆ ನೀರು ಸಂಗ್ರಹಗೊಂಡ ಪರಿಣಾಮ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ರಸ್ತೆ ತುಂಬಾ ಗುಂಡಿಗಳು ಬಿದ್ದು ಹಲವು ತಿಂಗಳು ಕಳೆದರೂ ಯಾರೊಬ್ಬರೂ ರಸ್ತೆ ಸುಧಾರಣೆಗೆ ಮುಂದಾಗುತ್ತಿಲ್ಲ.ಈ ರಸ್ತೆಯಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು, ವೃದ್ಧರು, ವ್ಯಾಪಾರಿಗಳು ಸಂಚರಿಸುತ್ತಾರೆ.
ದೊಡ್ಡ ಪ್ರಮಾಣದ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಜಾ ಸೇವಕ ಶೇಖರ ಸೇಡಂ ಆಗ್ರಹಿಸಿದ್ದಾರೆ.

ಮೊನ್ನೆ ತಾನೆ ಮಾನ್ವಿ ತಾಲೂಕಿನಲ್ಲಿ ನಡೆದಿರುವ ಘಟನೆ ನೋಡಿದ್ದೇವೆ ಅಂತಹ ಅನಾಹುತ ಸಂಭವಿಸುವ ಮುನ್ನವೆ ಆದಷ್ಟು ಬೇಗ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ವರದಿ:- ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!