Ad imageAd image

ನಟ ಕಿರಣ್ ರಾಜ್ ಕಾರು ಭೀಕರ ಅಪಘಾತ

Bharath Vaibhav
ನಟ ಕಿರಣ್ ರಾಜ್ ಕಾರು ಭೀಕರ ಅಪಘಾತ
WhatsApp Group Join Now
Telegram Group Join Now

ಬೆಂಗಳೂರು: ‘ಕನ್ನಡತಿ’ ಸೀರಿಯಲ್ ಖ್ಯಾತಿಯ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಕಿರಣ್ ರಾಜ್ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಅಪಘಾತಕ್ಕೀದಾಗಿದೆ.ಕಿರಣ್ ರಾಜ್ ಎಡೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಕೆಂಗೇರಿ ಬಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಕಿರಣ್ ರಾಜ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಕಾರಿನ ಒಂದು ಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಕಿರಣ್ ರಾಜ್ ಅಭಿನಯದ ‘ರಾನಿ’ ಸಿನಿಮಾ ಈವಾರ ಬಿಡುಗಡೆಯಾಗಬೇಕಿತ್ತು. ಇದೇ ಸಂದರ್ಭದಲ್ಲಿ ಅವರ ಕಾರು ಅಪಘಾತವಾಗಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!