Ad imageAd image

ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳ ಬಂಧನ

Bharath Vaibhav
ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳ ಬಂಧನ
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವೊಂದನ್ನು ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ರೂಪಾಯಿ ಹಣ ಪಡೆದು ಅಧಿಕಾರಿಗಳು ಪರಾರಿಯಾಗಿದ್ದರು. ಈ ಬಗ್ಗೆ ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಬೆಂಗಳೂರು ನಗರ ಡಿಸಿಪಿ ದೇವರಾಜ್ ಟಿಂ ಕಾರ್ಯಾಚರಣೆ ನಡೆಸಿ ಇದೀಗ ಮಹಿಳಾ ಅಧಿಕಾರಿ ಸೇರಿದಂತೆ ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!