Ad imageAd image

ಸಂಗೊಳ್ಳಿ ರಾಯಣ್ಣ, ರೈತನ ಮೂರ್ತಿ ಭಗ್ನ ಮಾಡಿದ ಕಿಡಿಗೇಡಿ

Bharath Vaibhav
ಸಂಗೊಳ್ಳಿ ರಾಯಣ್ಣ, ರೈತನ ಮೂರ್ತಿ ಭಗ್ನ ಮಾಡಿದ ಕಿಡಿಗೇಡಿ
WhatsApp Group Join Now
Telegram Group Join Now

ಧಾರವಾಡ: ಕಿಡಿಗೇಡಿಯೊಬ್ಬ ಸಂಗೊಳ್ಳಿ ರಾಯಣ್ಣ ಹಾಗೂ ರೈತನ ಮೂರ್ತಿ ಭಗ್ನ ಮಾಡಿದ ಘಟನೆ ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.

ಅಶೋಕ್‌ ಕಾಲವಾಡ (44) ಆರೋಪಿ. ಅಶೋಕ್‌ ನರಗುಂದ-ನವಲಗುಂದ ಬಂಡಾಯದ ಗೋಲಿಬಾರ್‌ನಲ್ಲಿ ಹುತಾತ್ಮರಾದ ಬಸಪ್ಪ ಲಕ್ಕುಂಡಿ ಪ್ರತಿಮೆ ಭಗ್ನ ಮಾಡಿದ್ದಾನೆ.

ಅದಾದ ಬಳಿಕ ಗ್ರಾಮದ ಬಸ್ ನಿಲ್ದಾಣದ ಎದುರಿನ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ಮೂರ್ತಿಯ ಖಡ್ಗಕ್ಕೆ ಭಗ್ನ ಮಾಡಿದ್ದಾನೆ. ಘಟನೆ ಬಳಿಕ ನವಲಗುಂದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿ ಮೂರ್ತಿ ಭಗ್ನ ಮಾಡಿದವನ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಗ್ನವಾಗಿರುವ ಮೂರ್ತಿಗಳಿಗೆ ಬಟ್ಟೆ ಸುತ್ತಿರುವ ಪೊಲೀಸರು, ಭಗ್ನ ಮಾಡಿರುವ ಮಾನಸಿಕ ಅಸ್ವಸ್ಥ ಅಶೋಕ್‌ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ಅಳಗವಾಡಿ ಗ್ರಾಮದಲ್ಲಿ ಪೊಲೀಸರು ಶಾಂತಿ ಸಭೆಯನ್ನು ಮಾಡಿದ್ದು, 5 ದಿನಗಳಲ್ಲಿ ರಾಯಣ್ಣನ ಹಾಗೂ ರೈತನ ಹೊಸ ಮೂರ್ತಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!