Ad imageAd image

50 ತುಂಡುಗಳಾಗಿ ಮಹಿಳೆ ಕತ್ತರಿಸಿ ಕೊಲೆ ಪ್ರಕರಣ : ಇಬ್ಬರು ಅರೆಸ್ಟ್ 

Bharath Vaibhav
50 ತುಂಡುಗಳಾಗಿ ಮಹಿಳೆ ಕತ್ತರಿಸಿ ಕೊಲೆ ಪ್ರಕರಣ : ಇಬ್ಬರು ಅರೆಸ್ಟ್ 
WhatsApp Group Join Now
Telegram Group Join Now

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು ನಾಲ್ವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಿವೆ.

ಮಹಾಲಕ್ಷ್ಮಿ ಕುಟುಂಬದವರು ಸ್ನೇಹಿತರಿಂದ ಮಾಹಿತಿ ಕಲೆಯಾಗಿದ್ದು, ಪ್ರಿಯಕರ ಸೇರಿದಂತೆ ನಾಲ್ವರ ಮೇಲೆ ಕೊಲೆಯ ಶಂಕೆ ಇದೆ.ನಾಲ್ವರಿಂದ ಕೃತ್ಯ ನಡೆದ ಶಂಕೆ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಹಂತಕರು ಮಹಿಳೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಬಚ್ಚಿಟ್ಟಿದ್ದಾರೆ. ಭಾನುವಾರ ನಡೆದ ಮರಣೋತ್ತರ ಪರೀಕ್ಷೆಯ ವೇಳೆ ಮೃತದೇಹವನ್ನು 50 ತುಂಡುಗಳಾಗಿ ಕತ್ತರಿಸಿರುವುದು ದೃಢಪಟ್ಟಿದೆ.

ತಲೆಯನ್ನು ಕೂಡ ಮೂರು ಭಾಗವಾಗಿ ಕತ್ತರಿಸಿದ್ದಾರೆ. ಕಾಲುಗಳನ್ನು ಕತ್ತರಿಸಿದ್ದಾರೆ. ಕರುಳು ತಲೆಯ ಕೂದಲು ಸೇರಿ ಇತರೆ ಭಾಗಗಳನ್ನು ಪ್ಲಾಸ್ಟಿಕ್ ನಲ್ಲಿ ತುಂಬಿ ಇಡಲಾಗಿತ್ತು ಎನ್ನಲಾಗಿದೆ.

ಕೊಲೆಯಾದ ಮಹಾಲಕ್ಷ್ಮಿ ಬಳಸುತ್ತಿದ್ದ ಮೊಬೈಲ್ ಸಂಖ್ಯೆ ಪಡೆಯಲಾಗಿದೆ. ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಕೂಡ ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!