Ad imageAd image

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ : ಸಚಿವ ಜಾರಕಿಹೊಳಿ ಮಹತ್ವದ ಹೇಳಿಕೆ

Bharath Vaibhav
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ : ಸಚಿವ ಜಾರಕಿಹೊಳಿ ಮಹತ್ವದ ಹೇಳಿಕೆ
satish jarkiholi
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರದ ಕುರಿತಂತೆ ಸಚಿವ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದು, ಸದ್ಯ ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ಅನಾವಶ್ಯಕವಾಗಿದ್ದು, ಸಿದ್ದರಾಮಯ್ಯ ಅವರೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಯಾವುದೇ ಒತ್ತಡ ಇಲ್ಲ. ದಲಿತ ಸಿಎಂ ಚರ್ಚೆ ಈ ಸಂದರ್ಭದಲ್ಲಿ ಅನಾವಶಸ್ಯಕ, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದಾರೆ.

ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅಲ್ಲದೇ ಬೇರೆಯವರಾಗಿದ್ರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಎಲ್ಲಾದಕ್ಕೂ ರಾಜೀನಾಮೆ ಕೊಡುವುದೇ ಪರಿಹಾರ ಆಗುತ್ತಾ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಹೈ ಕಮಾಂಡ್‌ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ಕಾನೂನು ಹೋರಾಟ ಮಾಡುತ್ತೇವೆ.

ಮುಡಾ ಪ್ರಕರಣ ತನಿಖೆ ಸಮಗ್ರವಾಗಿ ಆಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್‌ನದ್ದು ಕೂಡ ಇದೇ ಆಗ್ರಹವಾಗಿದೆ ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!