Ad imageAd image

50 ತುಂಡುಗಳಾಗಿ ಮಹಿಳೆ ಹತ್ಯೆ ಪ್ರಕರಣ : ಆರೋಪಿಯ ಒಡಿಶಾದಲ್ಲಿ ಆತ್ಮಹತ್ಯೆ

Bharath Vaibhav
50 ತುಂಡುಗಳಾಗಿ ಮಹಿಳೆ ಹತ್ಯೆ ಪ್ರಕರಣ : ಆರೋಪಿಯ ಒಡಿಶಾದಲ್ಲಿ ಆತ್ಮಹತ್ಯೆ
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಒಡಿಶಾದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಗೊತ್ತಾಗಿದೆ. ಮಹಾಲಕ್ಷ್ಮಿ ಹತ್ಯೆಯ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯ ವಿಚಾರಣೆಗಾಗಿ ಬೆಂಗಳೂರು ಪೊಲೀಸರು ಒಡಿಶಾಕ್ಕೆ ತೆರಳಿದ್ದರು.ಶಂಕಿತ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನ ವೈಯಾಲಿಕಾವಲ್ ಪ್ರದೇಶದ ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಮಹಾಲಕ್ಷ್ಮಿ ವಾಸಿಸುತ್ತಿದ್ದರು. ಸೆಪ್ಟೆಂಬರ್ 21 ರಂದು ಫ್ರಿಜ್ ನಲ್ಲಿ ಆಕೆಯ ದೇಹದ ತುಂಡುಗಳು ಪತ್ತೆಯಾಗಿದ್ದವು.

ಒಡಿಶಾದ ಭದ್ರಕ ಜಿಲ್ಲೆ ದುಶಿರಿ ಠಾಣೆ ವ್ಯಾಪ್ತಿಯ ಬೂಯಕಪುರದ ಬಳಿ ಮುಕ್ತಿ ರಂಜನ್ ರಾಯ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ಫಂಡಿ ಗ್ರಾಮದ ಮನೆಗೆ ಹೋಗಿದ್ದ ಆತ ಕೆಲ ಕಾಲ ಮನೆಯಲ್ಲಿದ್ದ. ನಿನ್ನೆ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಬೈಕ್ ನಲ್ಲಿ ಲ್ಯಾಪ್ ಟಾಪ್ ಇಟ್ಟು ಬೆಳಗ್ಗೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!