Ad imageAd image

ಸರ್ಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ಜಾರಿ ಮಾಡಲೇಬೇಕು : ಬಿ.ಕೆ. ಹರಿಪ್ರಸಾದ್ 

Bharath Vaibhav
ಸರ್ಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ಜಾರಿ ಮಾಡಲೇಬೇಕು : ಬಿ.ಕೆ. ಹರಿಪ್ರಸಾದ್ 
WhatsApp Group Join Now
Telegram Group Join Now

ಬೆಂಗಳೂರು: ಸರ್ಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ಜಾರಿ ಮಾಡಲೇಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಸರ್ಕಾರ ಬಿದ್ದರೆ ಬೀಳಲಿ ಯಾಕೆ ಹೆದರುತ್ತೀರಿ? ಜಾತಿ ಗಣತಿ ಜಾರಿ ವಿಚಾರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿಯೇ ಇದೆ. ಆದರೆ, ಜಾತಿ ಗಣತಿ ಜಾರಿಗೆ ಸರ್ಕಾರ ಏಕೆ ಯೋಚನೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮೀನಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಬೇಕು. ಜಾತಿಗಣತಿ ಜಾರಿಯಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿ ಗಣತಿ ಜಾರಿಯಿಂದಲೇ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಪ್ರಪಂಚವೇ ತಲೆ ಕೆಳಗಾಗಲಿ ಜಾತಿ ಗಣತಿ ಅನುಷ್ಠಾನ ಆಗಲೇಬೇಕು. ಸರ್ಕಾರ ಬೇಕಾದರೆ ಬಿದ್ರೆ ಬೀಳಲಿ ಯಾಕೆ ಹೆದರಬೇಕು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಹರಿಪ್ರಸಾದ್ ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!