Ad imageAd image

ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಜೈಲೇ ಗತಿ

Bharath Vaibhav
ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಜೈಲೇ ಗತಿ
WhatsApp Group Join Now
Telegram Group Join Now

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ನಾಳೆಗೆ ಕಾಯ್ದಿರಿಸಿತ್ತು.

ಇದೀಗ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿದ್ದು, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದಂತ ಅರ್ಜಿಯನ್ನು ಈ ಮೂಲಕ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ನಾಳೆಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು.

ಇದಲ್ಲದೇ ಎ.1 ಆರೋಪಿ ಪವಿತ್ರಾ ಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯ ನಡೆಸಿತು. ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಜಾಮೀನು ನಿರೀಕ್ಷೆಯಲ್ಲಿದ್ದರು.

ಆದರೇ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸುವ ಮೂಲಕ, ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!