ಇಳಕಲ್:-ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು. ಶ್ರೀ ಮಹರ್ಷಿ ವಾಲ್ಮೀಕಿ ಅವರು ಆದಿ ಕವಿ ಇವರು ರಾಮಾಯಣದ ರಚನೆಕಾರರು ಇವರು ಒಂದು ಮಹಾನ್ ಕಾವ್ಯವನ್ನು ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಒಬ್ಬ ಮನುಷ್ಯ ಯಾವಾಗಲೂ ಸಂತೋಷವಾಗಿರಲು ಹೇಗೆ ತಾನೇ ಸಾಧ್ಯ ಜೀವನ ಎಂದ ಮೇಲೆ ಸುಖ ಮತ್ತು ದುಃಖಗಳ ಮಿಶ್ರಣ ವಾಗಿರುತ್ತದೆ. ನಿರಂತರವಾಗಿ ಸಂತೋಷ ಮಾತ್ರ ಇರಲು ಸಾಧ್ಯವೇ ಇಲ್ಲ. ಮತ್ತು ಸಮಯಕ್ಕಿಂತ ಶಕ್ತಿಶಾಲಿ ದೇವತೆ ಮತ್ತೊಂದು ಇಲ್ಲ … ಇದೇ ರೀತಿ ಇನ್ನೂ ಅನೇಕ ನುಡಿಮುತ್ತುಗಳನ್ನು ನಮಗೆ ನೀಡಿದ್ದಾರೆ. ಪ್ರತಿಯೊಬ್ಬರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಎಂದು ಶ್ರೀಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜಿಸಬೇಕು.
ಇಂದು ಬೀದಿ ಬದಿ ವ್ಯಾಪಾರಸ್ಥರ ಪತ್ತಿನ ಸಹಕಾರಿ ಸಂಘದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು, ಪೂಜೆಯಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಪವಡೆಪ್ಪ ಬಸಪ್ಪ ಚಲವಾದಿ ಹಾಗೂ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ:-ದಾವಲ್ ಸಾಬ್