ಬೆಂಗಳೂರು: -ಸಮಾಜದಲ್ಲಿ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಮಾಜ ಕಳಕಳಿ ಮನೋಭಾವನೆ ಪ್ರಾಮಾಣಿಕತೆ ಪ್ರಬುದ್ಧತೆ ಮತ್ತು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ವ್ಯಕ್ತಿ ದಾಸರಹಳ್ಳಿ ಸುರೇಶ್ ಬಾಬು ಎಂದರೆ ತಪ್ಪಾಗಲಾರದು ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.
ಅವರು ನಗರದ ರವೀಂದ್ರ ಕಲಾಕ್ಷೇತ್ರದ ಸಭಾಂಗಣದಲ್ಲಿ ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟ್, ಕನ್ನಡ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಇಲಾಖೆ ಹಾಗೂ ಶಕ್ತಿ ಅಸ್ತ್ರ ಕನ್ನಡ ದಿನಪತ್ರಿಕೆ ಸಂಪಾದಕ ಎಲ್ . ಮಂಜುನಾಥ್ ಅವರ ನೇತೃತ್ವದಲ್ಲಿ ಆದಿ ಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಸುವರ್ಣ ರತ್ನಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಎನ್.ಆರ್ ಸುರೇಶ್ ಬಾಬು ರವರಿಗೆ ಸುವರ್ಣ ರತ್ನಶ್ರೀ ಪ್ರಶಸ್ತಿ ನೀಡಿ ಗೌರವಿಸಿ ಸಂತೋಷ್ ಹೆಗ್ಡೆ ಮಾತಾಡಿದರು.
ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ಎಲ್ ಮಂಜುನಾಥ್ ಸರ್ವರಿಗೂ ಸ್ವಾಗತಿಸಿದರು.ಇದೆ ವೇಳೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಮತ್ತು ಮನೋರಂಜನೆ ಜರುಗಿದವು.ಈ ಸಂದರ್ಭದಲ್ಲಿ ವಕೀಲ ಸಂಘದ ರಾಜ್ಯಾಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಖ್ಯಾತ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ, ಹೈಕೋರ್ಟ್ ಹಿರಿಯ ವಕೀಲ ವಿ.ಮಂಜುನಾಥ್, ರಾಜಗೋಪಾಲನಗರದ ಚಿಂತಕರು ಸಮಾಜದ ಅಪಾರ ಕಳಕಳಿಯುಳ್ಳ ಡಾ. ಬಿರಾದಾರ್ ಸೇರಿದಂತೆ ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ವರದಿ:- ಅಯ್ಯಣ್ಣ ಮಾಸ್ಟರ್