ಬೆಳಗಾವಿ:- ಮಾಜಿ ಮುಖ್ಯ ಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ ರವರನ್ನು 18 ನೇ ಲೋಕಸಭೆಯ “ವಾಣಿಜ್ಯ ಹಾಗೂ ಕೈಗಾರಿಕೆ ಸಂಸಧಿಯ ಸಲಹಾ ಸಮಿತಿಯ ಸದಸ್ಯರಾಗಿ” ನೇಮಕ ಮಾಡಿರುವುದಾಗಿ ಕೇಂದ್ರ ಸಂಸದಿಯ ವ್ಯವಹಾರ ಸಚಿವಾಲಯ ನವ-ದೆಹಲಿ ದಿನಾಂಕ: 21-10-2024 ರಂದು ಹೋರಡಿಸಿದ “ಅಧಿಸೂಚನೆಯಲ್ಲಿ” ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ ಅವರು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಹಾಗೂ ಲೋಕಸಭೆಯ ಸ್ಪೀಕರ್ ಸನ್ಮಾನ್ಯ ಓಂ ಬಿರ್ಲಾ ಅವರಿಗೆ ಧನ್ಯವಾದಗಳು ತಿಳಿಸಿದರು. ಎಂದು ಬೆಳಗಾವಿ ಲೋಕಸಭಾ ಸದಸ್ಯರ ಕಾರ್ಯಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ:- ಪ್ರತೀಕ ಚಿಟಗಿ