ಕಿತ್ತೂರು :-ಇವತ್ತು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಕಿತ್ತೂರು ಉತ್ಸವದಲ್ಲಿ ಇಂದು ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಸಂಸ್ಥಾನದ ಕುರಿತು ರಾಜ್ಯ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ವೀರರಾಣಿ ಚೆನ್ನಮ್ಮ ನವರ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಕಿತ್ತೂರು ಸೈನ್ಯದ ಐತಿಹಾಸಿಕ ಗೆಲುವಿಗೆ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿಯ ಕಿತ್ತೂರು ಉತ್ಸವ ಅದ್ದೂರಿಯಾಗಿ ಜರುಗುತ್ತಿದ್ದು, ಕನ್ನಡಿಗರ ಶೌರ್ಯವನ್ನು ಸಾರುವ ಕಿತ್ತೂರು ಉತ್ಸವದಲ್ಲಿ ಎಲ್ಲರೂ ಭಾಗವಹಿಸಿದ್ದರು.
ಈ ವೇಳೆ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಎಸ್. ಘಂಟಿ, ರಾಯಚೂರು ಲೋಕಾಯುಕ್ತ ಎಸ್.ಪಿ. ಪಿ.ವಿ. ಸ್ನೇಹಾ ಉಪಸ್ಥಿತರಿದ್ದರು.
ವರದಿ:-ಶಿವಾಜಿ ಎನ ಬಾಲೇಶಗೋಳ