ಸೇಡಂ:- ಸೇಡಂ ತಾಲೂಕ ಪತ್ರಕರ್ತ ವೆಂಕಟಪ್ಪ ಕೆ ಸುಗ್ಗಾಲ್ ಅವರಿಗೆ ಭಾರತ ವೈಭವ ನ್ಯೂಸ್ ಸಂಸ್ಥೆ ವತಿಯಿಂದ ಉತ್ತಮ ಪತ್ರಕರ್ತ ಪ್ರಶಸ್ತಿ ನೀಡಿದ ಪ್ರಯುಕ್ತ ದಿನಾಂಕ 5/10/2024ರಂದು ಸೇಡಂ ಪಟ್ಟಣದಲ್ಲಿ ಸರ್ವ ಧರ್ಮ ಸಮನ್ವಯ ಸಮಿತಿ, ಬಹುಜನ ಸಮಾಜ ಪಕ್ಷ, ಕನ್ನಡಪರ ಸಂಘಟನೆ ಮತ್ತು ಅಂಬೇಡ್ಕರ್ ಯುವ ಸೇನೆ ತಾಲೂಕ ಘಟಕ ವತಿಯಿಂದ ಪ್ರೀತಿ ಪೂರ್ವಕವಾಗಿ ಆಹ್ವಾನಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗಿಯಾಗಿದ್ದರು.
ವರದಿ :-ವೆಂಕಟಪ್ಪ ಕೆ ಸುಗ್ಗಾಲ್.




