Ad imageAd image

ಫೆ. 17 ರಂದು ನಡೆಯಬೇಕಿದ್ದ ಮಹತ್ವದ ಸಂಪುಟ ಸಭೆ ಮುಂದೂಡಿಕೆ

Bharath Vaibhav
ಫೆ. 17 ರಂದು ನಡೆಯಬೇಕಿದ್ದ ಮಹತ್ವದ ಸಂಪುಟ ಸಭೆ ಮುಂದೂಡಿಕೆ
vidhan soudha
WhatsApp Group Join Now
Telegram Group Join Now

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆ ವಿಶ್ರಾಂತಿ ಅಗತ್ಯವಿರುವ ಕಾರಣ ಫೆ.17 ರಂದು ನಿಗದಿಯಾಗಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಫೆ.17 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ.

ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದರು. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.

WhatsApp Group Join Now
Telegram Group Join Now
Share This Article
error: Content is protected !!