Ad imageAd image

ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು 

Bharath Vaibhav
WhatsApp Group Join Now
Telegram Group Join Now

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬಟ್ಟೆ ಅಂಗಡಿ ಸಿಬ್ಬಂದಿಯೊಬ್ಬ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಂಚಗಾರ ಗಲ್ಲಿಯ ಎನ್.ಆರ್.ಸಾರಿ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರಿಗೆ ವಿವಿಧ ಸಾರಿಗಳನ್ನು ತೋರಿಸುತ್ತಿದ್ದ ಬಟ್ಟೆ ಅಂಗಡಿ ಸಿಬ್ಬಂದಿ ಭುವರ್ ಸಿಂಗ್ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾರೆ.

ಗ್ರಾಹಕರು ಕಂಗಾಲಾಗಿದ್ದಾರೆ. ತಕ್ಷಣ ಇನ್ನೋರ್ವ ಸಿಬ್ಬಂದಿ ಆತನನ್ನು ಮೇಲಕೆತ್ತಲು ಯತ್ನಿಸಿದರೂ ಎಚ್ಚರಗೊಂಡಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ.ಹೃದಯಾಘಾತದಿಂದ ಭುವರ್ ಸಿಂಗ್ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!