ಬೆಂಗಳೂರು:ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಹೊಳಿಯವರು ಬೆಂಗಳೂರಿನ ಗೃಹಕಚೇರಿಯಲ್ಲಿ ವಾಲ್ಮೀಕಿ ಗುರುಪೀಠದ ಮಹಾಸ್ವಾಮಿಗಳು ಪರಮಪೂಜ್ಯ ಶ್ರೀ ಡಾ. ಪ್ರಸನ್ನಾನಂದ ಪುರಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ ಎಸ್.ಟಿ.ಸಮುದಾಯದ ಸಚಿವರ ಹಾಗೂ ಶಾಸಕರ ಸಭೆಯಲ್ಲಿ ಭಾಗವಹಿಸಿ ಮಹತ್ವದ ವಿಚಾರಗಳ ಕುರಿತು ಚರ್ಚೆಯನ್ನು ನಡೆಸದರು.

ಈ ಸಂದರ್ಭದಲ್ಲಿ ಹಿರಿಯ ಸಚಿವ ಕೆ.ಎನ್.ರಾಜಣ್ಣ ಅವರು ಹಾಗೂ ಎಸ್.ಟಿ. ಸಮುದಾಯದ ಶಾಸಕ ಮಿತ್ರರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




