Ad imageAd image

ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಸಾವನ್ನಪ್ಪಿದ್ದ ಕಾರ್ಯಕರ್ತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ 

Bharath Vaibhav
ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಸಾವನ್ನಪ್ಪಿದ್ದ ಕಾರ್ಯಕರ್ತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ 
WhatsApp Group Join Now
Telegram Group Join Now

ಹಾವೇರಿ: ಬೆಳಗಾವಿಯಲ್ಲಿ ನಡೆದಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದನು. ಇಂತಹ ಕೈ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿಂದ 5 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ನದಿಹರಳಹಳ್ಳಿ ಗ್ರಾಮ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬುವರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.ಈ ಸಮಾವೇಶದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಶಾಸಕ ಪ್ರಕಾಶ್ ಕೋಳಿವಾಡಗೆ ಮೃತ ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿರುವಂತ ಶಾಸಕ ಪ್ರಕಾಶ್ ಕೋಳಿವಾಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಗಮನಕ್ಕೆ ತಂದಿದ್ದರು. ಇಂದು ಕೆಪಿಸಿಸಿಯಿಂದ 5 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬಸ್ಥರಿಗೆ ವಿತರಿಸಲಾಯಿತು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!