Ad imageAd image

ಬೈಲಹೊಂಗಲ : ರಾಜ್ಯಪಾಲರು ಹೆಸರಿನಲ್ಲಿದ್ದ 5 ಎಕರೆ ಜಮೀನು ಭೂಗಳ್ಳರ ಪಾಲು..??

Bharath Vaibhav
ಬೈಲಹೊಂಗಲ : ರಾಜ್ಯಪಾಲರು ಹೆಸರಿನಲ್ಲಿದ್ದ 5 ಎಕರೆ ಜಮೀನು ಭೂಗಳ್ಳರ ಪಾಲು..??
WhatsApp Group Join Now
Telegram Group Join Now

ಬೆಳಗಾವಿ : ಕರ್ನಾಟಕ ರಾಜ್ಯಪಾಲರು ಹೆಸರಿನಲ್ಲಿದ್ದ ಸುಮಾರು 5 ಎಕರೆ ಜಮೀನನ್ನು ಭೂಗಳ್ಳರ ಪಾಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಬೆಳಗಾವಿಯ ಬೈಲಹೊಂಗಲ ತಾಲೂಕಿನಲ್ಲಿ ಬಡ ಜನರಿಗೆ ನಿವೇಶನ ಹಂಚಲು ಸರ್ಕಾರವು ಖರೀದಿಸಿದ್ದ 5 ಎಕರೆ ಜಮೀನು ಇದೀಗ ಭೂಗಳ್ಳರ ಪಾಲಾಗಿದ್ದು, ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಹೆಸರಿಗೆ ರೆಜಿಸ್ಟರ್ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ 6 ಎಕರೆ ಜಮೀನನ್ನು 2002ರಲ್ಲಿ ಖರೀದಿಸಿ, ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರವೂ ರಾಜ್ಯಪಾಲರ ಹೆಸರಿನಲ್ಲಿ ನೋಂದಣಿ ಮಾಡಲಾಗಿತ್ತು.

ಆದರೆ, ಕೆಲ ವರ್ಷಗಳ ಹಿಂದೆ ಇದೇ ಸರ್ವೇ ನಂಬರ್ ನ ಜಮೀನಿನ ಪಹಣಿ ಪತ್ರ ಸರಿ ಪಡಿಸುವ ಹೆಸರಿನಲ್ಲಿ 6 ಎಕರೆ ಜಮೀನಿನಲ್ಲಿ 35 ಗುಂಟೆ ಜಾಗವನ್ನು ಮಾತ್ರ ಬಿಟ್ಟು ಉಳಿದ ಎಲ್ಲಾ ಜಮೀನನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಹೆಸರಿಗೆ ರಿಜಿಸ್ಟರ್ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು ಈ ಪ್ರಕರಣದಲ್ಲಿ ಅಂದಿನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತು ಬೈಲಹೊಂಗಲ ಎಸಿ ಪ್ರಭಾವತಿಯವರ ಕೈವಾಡ ಇದೆ ಎನ್ನಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!