ನವದೆಹಲಿ: ಏಪ್ರಿಲ್ 22 ರಂದು 26 ನಾಗರಿಕರ ಸಾವಿಗೆ ಕಾರಣವಾದ ಪಹಲ್ಯಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ವಿರೋಧ ಪಕ್ಷದ ನಾಯಕರಿಗೆ ವಿವರಿಸಲು ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷ ಸಭೆ ನಡೆಸುತ್ತಿದೆ.
ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ರುಲ್ ಮುಜಾಹಿದ್ದೀನ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಮೂಲಸೌಕರ್ಯಗಳು, ನೆರೆಯ ದೇಶದಲ್ಲಿ ಸಶಸ್ತ್ರ ಪಡೆಗಳು ಹೆಚ್ಚಿನ ನಿಖರವಾದ ಮಿಲಿಟರಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಉದ್ದೇಶಿತ ಸಭೆಯ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜು ಮಾಹಿತಿ ನೀಡಿದರು.
“ನಮ್ಮ ದೇಶವು ದೊಡ್ಡ ಕ್ರಮ ಕೈಗೊಂಡಿದೆ. ನಮ್ಮ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂ ಕುರಿತು ನಾವು ಸರ್ವಪಕ್ಷ ಸಭೆ ಕರದಿದ್ದೇವೆ. ಪರಿಸ್ಥಿತಿಯ ಬಗ್ಗೆ ನಾವು ಎಲ್ಲಾ ಪಕ್ಷಗಳಿಗೆ ವಿವರಿಸಬೇಕು,
ಏಕೆಂದರೆ ಇದು ಸರ್ಕಾರದ ಜವಾಬ್ದಾರಿಯಾಗಿದೆ ಮತ್ತು ಹಾಗೆ ಮಾಡಲು ಪ್ರಧಾನಿ ನಮಗೆ ನಿರ್ದೇಶನ ನೀಡಿದ್ದಾರೆ. ಇಡೀ ದೇಶವು ಸಶಸ್ತ್ರ ಪಡೆಗಳೊಂದಿಗೆ ಇದೆ” ಎಂದು ರಿಜಿಜು ಇಂದು ಸಂಸತ್ತನ್ನು ತಲುಪಿದ ನಂತರ ಹೇಳಿದರು.ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.




