Ad imageAd image

7280 ರೂ. ಬೆಂಬಲ ಬೆಲೆಯಲ್ಲಿ ಸೂರ್ಯ ಕಾಂತಿ ಖರೀದಿ : ಶಿವಾನಂದ ಪಾಟೀಲ 

Bharath Vaibhav
7280 ರೂ. ಬೆಂಬಲ ಬೆಲೆಯಲ್ಲಿ ಸೂರ್ಯ ಕಾಂತಿ ಖರೀದಿ : ಶಿವಾನಂದ ಪಾಟೀಲ 
WhatsApp Group Join Now
Telegram Group Join Now

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಖರೀದಿ ಕೇಂದ್ರಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಪ್ರತಿ ಕ್ವಿಂಟಲ್ ಗೆ 7280 ರೂ.ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಜಿಲ್ಲೆಗಳ ವ್ಯಾಪ್ತಿಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಎಕರೆಗೆ 4 ಕ್ವಿಂಟಲ್ ನಂತೆ ಗರಿಷ್ಠ 20 ಕ್ವಿಂಟಲ್ ಸೂರ್ಯಕಾಂತಿ ಖರೀದಿಸಲಾಗುವುದು.

ಖರೀದಿ ಪ್ರಕ್ರಿಯೆ ಆದೇಶ ಹೊರಡಿಸಿದ ನಂತರ 90 ದಿನಗಳವರೆಗೆ ನಡೆಯಲಿದೆ. ರೈತರು ಸಮೀಪದ ಪ್ಯಾಕ್ಸ್, ಎಫ್.ಪಿ.ಒ. ಮತ್ತು TAPCMSಗಳಲ್ಲಿ ಸೂರ್ಯಕಾಂತಿ ಮಾರಾಟ ಮಾಡಬಹುದಾಗಿದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!