Ad imageAd image

ಮೃತ ಭೀಮರಾವ ಝಳಕೆ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ಪರಿಹಾರ ಕಲ್ಪಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ

Bharath Vaibhav
ಮೃತ ಭೀಮರಾವ ಝಳಕೆ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ಪರಿಹಾರ ಕಲ್ಪಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ
WhatsApp Group Join Now
Telegram Group Join Now

ಭಾಲ್ಕಿ : ತಾಲೂಕಿನ ಭಾಟಸಂಗವಿ ಗ್ರಾಮದ ರೈತ ಶ್ರೀ ನಾಮದೇವ ಭೀಮರಾವ್ ಝಳಕೆ (ವಯಸ್ಸು 65) ಅವರು ಇತ್ತೀಚೆಗೆ ಮಾಂಜ್ರಾ ನದಿಯನ್ನು ದಾಟುವ ಪ್ರಯತ್ನದಲ್ಲಿ ನೀರಿನ ತೀವ್ರ ರಭಸಕ್ಕೆ ಕೊಚ್ಚಿ ಹೋಗಿ ದುರಂತವಾಗಿ ಸಾವನ್ನಪ್ಪಿದರು. ಈ ಘಟನೆಗೆ ಸಂಬಂಧಿಸಿದಂತೆ ಇಂದು ಕರ್ನಾಟಕ ರಾಜ್ಯದ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಈಶ್ವರ ಖಂಡ್ರೆ ಅವರು ಮೃತ ರೈತನ ನಿವಾಸಕ್ಕೆ ಭೇಟಿ ನೀಡಿದರು.

ಮೃತನ ಕುಟುಂಬದವರೊಡನೆ ಮಾತನಾಡಿ ಸಾಂತ್ವನ ಹೇಳಿದರು ಹಾಗೂ ಈ ದುಃಖದ ಸಂದರ್ಭದಲ್ಲಿ ಧೈರ್ಯದಿಂದ ಇರಲು ಮನೋಬಲ ತುಂಬಿದರು. ನಂತರ ಸರ್ಕಾರದಿಂದ ಅನುಮೋದಿಸಲಾದ ₹5 ಲಕ್ಷ ರೂ. ಪರಿಹಾರ ಧನದ ಚೆಕ್‌ನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಪ್ರತಿನಿಧಿಗಳು, ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ಸಂತೋಷ ಬಿಜಿ ಪಾಟೀಲ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!