Ad imageAd image

ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವಕವಿಗೋಷ್ಠಿಗೆ ದೇವೂ ಮಾಕೊಂಡ ಆಯ್ಕೆ

Bharath Vaibhav
ಕರ್ನಾಟಕ ಸಾಹಿತ್ಯ ಅಕಾಡೆಮಿ ಯುವಕವಿಗೋಷ್ಠಿಗೆ ದೇವೂ ಮಾಕೊಂಡ ಆಯ್ಕೆ
WhatsApp Group Join Now
Telegram Group Join Now

ವಿಜಯಪುರ : ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಹಮ್ಮಿಕೊಳ್ಳಲಾದ ಯುವ ಕವಿಗೋಷ್ಠಿಗೆ ವಿಜಯಪುರ ಜಿಲ್ಲೆ, ಸಿಂದಗಿಯ ಉಪನ್ಯಾಸಕ, ಯುವಕವಿ, ಲೇಖಕ, ಅನುವಾದಕರು ಆಗಿರುವ ದೇವೂ ಮಾಕೊಂಡ ಅವರು ಆಯ್ಕೆಯಾಗಿದ್ದಾರೆ.

ದಿನಾಂಕ ೨೧-೦೭-೨೦೨೫ ರಂದು ಸೋಮವಾರ ಬೆಳಗ್ಗೆ ೧೦. ೩೦ ಗಂಟೆಗೆ ಕನ್ನಡ ಭವನ ಬೆಳಗಾವಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಎಲ್ಎನ್ ಮುಕುಂದರಾಜ ಅಧ್ಯಕ್ಷರು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಬಸವರಾಜ ಜಗಜಂಪಿ ನಿರ್ದೇಶಕರು,ಬೆಳಗಾವಿ ಇವರು ವಹಿಸಲಿರುವರು. ಆಶಯ ನುಡಿಯನ್ನು ಡಾ. ಮೈತ್ರೇಯಿಣಿ ಗದ್ದಿಗೆಪ್ಪಗೌಡರ ಸಂಚಾಲಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರು ಮಾತನಾಡಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಶ್ರೀ ಕರಿಯಪ್ಪ ಎನ್, ಡಾ ಅರ್ಜುನ್ ಗೊಳಸಂಗಿ ಸದಸ್ಯರು ಇವರು ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ನಿರ್ವಹಣೆಯನ್ನು ಮಹಾದೇವ ಬಸರಕೋಡ ಸದಸ್ಯರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರು ನಿರ್ವಹಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ವರದಿ: ಸಾಯಬಣ್ಣ ಮಾದರ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!