Ad imageAd image

ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ ಇಲ್ಲ ಡಿಜೆ

Bharath Vaibhav
ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ ಇಲ್ಲ ಡಿಜೆ
WhatsApp Group Join Now
Telegram Group Join Now

 ——–ಅಹಿತಕರ ಘಟನೆ ಜರುಗಿದರೆ ಆಯೋಜಕರ ಮೇಲೆ ಕ್ರಮ: ಎಸ್.ಪಿ ಡಾ. ಶೋಭರಾಣಿ ವಿ. ಜೆ.

ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್, ಗಣೇಶ ಚತುರ್ಥಿ ಎರಡು ಹಬ್ಬಗಳು ಒಟ್ಟಿಗೆ ಇರುವುದರಿಂದ ಎಲ್ಲರೂ ಸ್ನೇಹ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕೆಂದು ಬಳ್ಳಾರಿ ಜಿಲ್ಲಾ ಎಸ್ ಪಿ . ಡಾ. ಶೋಭರಾಣಿ ವಿ. ಜೆ. ಹೇಳಿದರು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಹಿಂದೂ-ಮುಸ್ಲಿಂ ಮುಖಂಡರ ಶಾಂತಿ ಸಭೆಯಲ್ಲಿ ಮಾತನಾಡಿದ ಎಸ್ಪಿ ಡಾ. ಶೋಭರಾಣಿ ವಿ. ಜೆ. ಅವರು ಯಾರು ಕೂಡ ಪಿಓಪಿ ಗಣೇಶ್ ಮೂರ್ತಿ ಬಳಸದೇ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು. ಪ್ಲೆಕ್ಸ್, ಬಟಿಂಗ್ಸ್ ಹಾಕಬೇಕಾದರೆ ಅನುಮತಿ ಪಡೆಯಬೇಕು. ಎಲ್ಲಾ ಧರ್ಮೀಯರು ಸೇರಿ ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಭಾವನೆಗಳಿಗೆ ಧಕ್ಕೆ ಬಾರದ ರೀತಿ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಆಚರಿಸಬೇಕು ಸಾರ್ವಜನಿಕರ ಸ್ಥಳಗಳಲ್ಲಿ ಈಗಾಗಲೇ ಸಿಸಿಟಿವಿಗಳನ್ನು ಅಳವಡಿಸಿದ್ದು ಎಲ್ಲರೂ ಜಾಗೃತೆಯಿಂದ ಇರಲು ತಿಳಿಸಿದರು. ಗಣೇಶ ಪ್ರತಿಷ್ಠಾಪನೆಗೆ ಅಗತ್ಯ ಇರುವ ಸ್ಥಳ ಪೆಂಡಾಲ್ ವಿದ್ಯುತ್ ಸಂಪರ್ಕ ಇತರೆ ಪರವಾನಿಗೆಗಳನ್ನು ಏಕಗವಕ್ಷಿ ಪದ್ಧತಿ ಹೇಳಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ, ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಸಿಸಿಟಿವಿ ಕಡ್ಡಾಯ, ಒಂದು ಧರ್ಮಕ್ಕೆ ತೊಂದರೆ ಕೊಡದಂತೆ ಹಬ್ಬ ಆಚರಿಸಬೇಕು ಎಚ್ಚರಿಕೆ ನೀಡಿದರು.

ಈ ವೇಳೆ ಡಿ ವೈ ಎಸ್ ಪಿ ಪ್ರಸಾದ್ ಗೋಕಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆಬಿ ವಾಸು ಕುಮಾರ್ ಪಿಎಸ್ಐ ಅವಿನಾಶ್ ಕಾಂಬ್ಳೆ, ಎಎಸ್ಐ ಬಸವರಾಜ, ಪೊಲೀಸ್ ಸಿಬ್ಬಂದಿಯವರು ಹಾಗೂ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಪ್ರಗತಿಪರ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!