Ad imageAd image

ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು 

Bharath Vaibhav
ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು 
WhatsApp Group Join Now
Telegram Group Join Now

ವಿಜಯಪುರ: ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ್ದಾನೆ. ವಿಜಯಪುರ ನಗರದ ಟಾಂಗಾ ಸ್ಟ್ಯಾಂಡ್ ಬಳಿ ಘಟನೆ ನಡೆದಿದೆ.

ವಿಜಯಪುರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ(21) ಮೃತಪಟ್ಟ ಯುವಕ. ನಗರದಲ್ಲಿ ಏಳನೇ ದಿನದ ನೂರಾರು ಗಣೇಶನ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ

ಮೂರ್ತಿಗಳು ಸಾಗಲು ಕೋಲಿನಿಂದ ಶುಭಂ ವಿದ್ಯುತ್ ತಂತಿಯನ್ನು ಮೇಲೆತ್ತಿದ್ದ. ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆಯಲ್ಲಿ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ.

ಸ್ಥಳದಲ್ಲೇ ಡಿವೈಎಸ್ಪಿ ಬಸವರಾಜ ಯಲಿಗಾರ, ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ. ವಿಜಯಪುರ ನಗರದ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರ್ತಿಗಳು ಸಾಗಲು ಕೋಲಿನಿಂದ ಶುಭಂ ವಿದ್ಯುತ್ ತಂತಿಯನ್ನು ಮೇಲೆತ್ತಿದ್ದ. ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆಯಲ್ಲಿ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ.

ಸ್ಥಳದಲ್ಲೇ ಡಿವೈಎಸ್ಪಿ ಬಸವರಾಜ ಯಲಿಗಾರ, ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ. ವಿಜಯಪುರ ನಗರದ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!