ಬೆಂಗಳೂರು : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನ ಹೊಂದಿದ್ದಾರೆ.
ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬದುಕಿನ ಪಯಣದಲ್ಲಿ ಯಾರೂ ಶಾಶ್ವತವಾಗಿ ಜೊತೆಗಿರಲಾರರು.
ಆದರೆ ಕೆಲವರ ವಿಯೋಗ ಅನಿರೀಕ್ಷಿತ ಹಾಗು ದುಃಖಮಯ. ಅಪ್ಪ ಇಂದು ಬೆಳಗ್ಗೆಯಷ್ಟೇ ಇಹ ಲೋಕದ ಯಾತ್ರೆ ಮುಗಿಸಿದರು. ಕೆಲದಿನಗಳ ಶ್ವಾಸಕೋಶದ ಸಮಸ್ಯೆ ಅವರನ್ನು ಈ ಹಂತಕ್ಕೆ ಒಯ್ಯುವುದೆಂದು ತಿಳಿದಿರಲಿಲ್ಲ.
ಅವರನ್ನು ಪ್ರೀತಿಸುವವರು ಬಹಳ ಮಂದಿ. ಎಲ್ಲರಿಗೂ ವಿಷಯ ಮುಟ್ಟಿಸುವುದು ಹೇಗೆ? ಅದಕ್ಕೆ ಇಲ್ಲಿ ಹಂಚಿಕೊಳ್ಳುತ್ತಿರುವೆ. ಅವರ ಸದ್ಗತಿಗೆ ಪ್ರಾರ್ಥಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.




