Ad imageAd image

ಜಾತಿ ಗಣತಿಗೆ ನಿರ್ಲಕ್ಷ್ಯ ತೋರಿದ ರಾಜ್ಯಾದ್ಯಂತ 9 ಸಮೀಕ್ಷಕರು ಅಮಾನತು 

Bharath Vaibhav
ಜಾತಿ ಗಣತಿಗೆ ನಿರ್ಲಕ್ಷ್ಯ ತೋರಿದ ರಾಜ್ಯಾದ್ಯಂತ 9 ಸಮೀಕ್ಷಕರು ಅಮಾನತು 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 9 ಸಮೀಕ್ಷಕರನ್ನು ಅಮಾನತುಗೊಳಿಸಲಾಗಿದೆ.

ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮಿಕ್ಷೆ- ಜಾತಿಗಣತಿ ನಡೆಯುತ್ತಿದ್ದು, ಗಣತಿಗೆ ಗೈರಾಗಿದ್ದ 9 ಮಂದಿ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೆ, ಅಧಿಕಾರಿಗಳ ದೂರವಾಣಿ ಕರೆಯನ್ನು ಸ್ವೀಕರಿಸದೇ ಬೇಜವಾಬ್ದಾರಿ ಹಾಗೂ ಅತೀವ ನಿರ್ಲಕ್ಷ್ಯ ತೋರಿದ 8 ಸಹ ಶಿಕ್ಷಕರನ್ನು ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್ ಅವರ ಆದೇಶದ ಮೇರೆಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕೊಪ್ಪಳದಲ್ಲಿ ಸಮೀಕ್ಷೆಗೆ ಗೈರುಹಾಜರಾದ ಕುಷ್ಟಗಿ ತಾಲೂಕು ಜೂಲಕುಂಟಿ ಗ್ರಾಮದ ಶಿಕ್ಷಕ ರಾಮಪ್ಪ ತಳವಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್ ಅವರು ಭಾನುವಾರ ಆದೇಶಿಸಿದ್ದಾರೆ .

ಮೈಸೂರು ಜಿಲ್ಲೆಯಲ್ಲಿ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೆ, ಅಧಿಕಾರಿಗಳ ದೂರವಾಣಿ ಕರೆಯನ್ನು ಸ್ವೀಕರಿಸದೇ ಬೇಜವಾಬ್ದಾರಿ ಹಾಗೂ ಅತೀವ ನಿರ್ಲಕ್ಷ್ಯ ತೋರಿದ 8 ಸಹ ಶಿಕ್ಷಕರನ್ನು ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್ ಅವರ ಆದೇಶದ ಮೇರೆಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕೊಪ್ಪಳದಲ್ಲಿ ಸಮೀಕ್ಷೆಗೆ ಗೈರುಹಾಜರಾದ ಕುಷ್ಟಗಿ ತಾಲೂಕು ಜೂಲಕುಂಟಿ ಗ್ರಾಮದ ಶಿಕ್ಷಕ ರಾಮಪ್ಪ ತಳವಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್ ಅವರು ಭಾನುವಾರ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!