ಅಥಣಿ: ಪ್ರತಿ ಟನ್ ಕಬ್ಬಿಗೆ 3,500 ರೂ ದರ ನಿಗದಿಪಡಿಸಬೇಕು ಎಂದು ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟಣೆ ಮಾಡಿದರು.

ಅಥಣಿ ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ರೈತರು, ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಸಂಘಟನೆ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಪ್ರೀತಿ ಪೂಜಾರಿ ಮತ್ತು ಕರುನಾಡ ಕಾರ್ಮಿಕರ ವೇದಿಕೆ ಬೆಳಗಾವಿಯ ಜಿಲ್ಲಾಧ್ಯಕ್ಷರು ಮಹಿಳಾ ಘಟಕ ಶ್ರೀಮತಿ ರಾಣಿ ಬಡಿಗೇರ ಮಾತನಾಡಿದ ಅವರು ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,500 ನೀಡಬೇಕು ಎಂದು ಒತ್ತಾಯಿಸಿದರು ಹಾಗೂ ಬೆಲೆ ನಿಗದಿ ಆಗುವವರೆಗೆ ನಿರಂತರ ಹೋರಾಟ ಮಾಡುತ್ತೇವೆ ಎಂದು ಹೇಳಿದರು . ಅದನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕು ಕೇಂದ್ರದ ಮೂಲಕ ಹೋರಾಟ ಮಾಡುತ್ತಿದ್ದೇವೆ’ ಎಂದರು.
ನಮ್ಮ ಬೇಡಿಕೆಯಂತೆ ಕಾರ್ಖಾನೆ ಮಾಲಿಕರು ಕಬ್ಬಿಗೆ ದರ ನಿಗದಿಪಡಿಸಬೇಕು. ಬಳಿಕ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು’ ಎಂದು ಒತ್ತಡ ಹಾಕಿದರು. ಈ ಸಂದರ್ಭದಲ್ಲಿ ನೂರಾರು ರೈತರು ಮಾತ್ತು ರೈತ ಮಹಿಳೆಯರು ಬಾಗಿಯಾಗಿದ್ದರು.
ವರದಿ: ಸುಕುಮಾರ ಮಾದರ




