Ad imageAd image

ಜೈಲಿನಲ್ಲಿ ವಿಪರೀತ ಚಳಿ : ದರ್ಶನ್ ಗೆ ಕಂಬಳಿ ನೀಡುವಂತೆ ಕೋರ್ಟ್ ಸೂಚನೆ

Bharath Vaibhav
ಜೈಲಿನಲ್ಲಿ ವಿಪರೀತ ಚಳಿ : ದರ್ಶನ್ ಗೆ ಕಂಬಳಿ ನೀಡುವಂತೆ ಕೋರ್ಟ್ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು : ಜೈಲಿನಲ್ಲಿ ವಿಪರೀತ ಚಳಿಯಿಂದ ನಿದ್ದೆ ಬರದೇ ಒದ್ದಾಡುತ್ತಿದ್ದೇನೆ ನನಗೆ ಕಂಬಳಿ ಕೊಡಿ ಎಂದು ನಟ ದರ್ಶನ್ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದು, ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರಿನ 75 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಟ ದರ್ಶನ್ ಹಾಜರಾದರು.ಚಳಿಯಿಂದ ನಿದ್ದೆ ಮಾಡಲು ಆಗುತ್ತಿಲ್ಲ.

ನಮಗೆ ಕಂಬಳಿ ನೀಡಿ ಎಂದು ದರ್ಶನ್ ಮನವಿ ಮಾಡಿಕೊಂಡಿದ್ದರು. ಪದೇ ಪದೇ ಆದೇಶಿಸಿದ್ರೂ ಹೀಗ್ಯಾಕೆ ಮಾಡುತ್ತಾರೆ ಎಂದ ಜಡ್ಜ್ ಕೂಡಲೇ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನೂ, ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!