ಯಮಕನಮರಡಿ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ಸಚಿವರ ಸೂಚನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕರಗುಪ್ಪಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ ಅಂಬೇಡ್ಕರ್ ಭವನ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.
ಇದೇ ವೇಳೆ ಕರಗುಪ್ಪಿ ಗ್ರಾಮ ದೇವತೆಯಾದ ಶ್ರೀ ಸೀಮೆ ದೇವಸ್ಥಾನದ ಹತ್ತಿರ 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಮುದಾಯ ಭವನ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಡಾ: ಶ್ರೀಅಮರಸಿದ್ದೇಶ್ವರ ಮಹಾಸ್ವಾಮಿಗಳು ಡಾ: ಶಿವಶೇರಣುದೇವರು. ಸಚಿವರ ಆಪ್ತ ಸಹಾಯಕರಾದ ಶ್ರೀ ಲಗಮಣ್ಣಾ ಪನಗುದ್ದಿ ಮುಖಂಡರಾದ ಶ್ರೀ ಈರಪ್ಪ ಬಂಜೀರಾಮ ಎಸ್ ಟಿ ಘಟಕದ ಉಪಾಧ್ಯಕ್ಷರಾದ ಮಾರುತಿ ಕುದುರಿ ಜನಪ್ರತಿನಿಧಿಗಳು ಊರಿನ ಹಿರಿಯರು ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ




