ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಂಚಾರ ನಿಯಮ ಉಲ್ಲಂಘಿಸಿದಂತ ವಾಹನ ಸವಾರರಿಗೆ ಮತ್ತೆ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ.
ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಾವತಿಸಲು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ.




