ದಾವಣಗೆರೆ : ಸರ್ಕಾರಿ ಪರೀಕ್ಷೆ ಬರೆದರೂ ಎಲ್ಲೂ ಕೆಲಸ ಸಿಗದ ಹಿನ್ನಲೆ ಯುವಕನೋರ್ವ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ.ಮೃತ ಯುವಕನನ್ನು ಅಂಜಿನಪ್ಪ (26) ಎಂದು ಗುರುತಿಸಲಾಗಿದೆ.
ಅಂಜಿನಪ್ಪ ಪದವಿ ಮುಗಿಸಿದ ನಂತರದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ದಿನರಾತ್ರಿ ಓದುತ್ತಿದ್ದ. ದಿನನಿತ್ಯ ಹಗಲು ರಾತ್ರಿ ಎನ್ನದೆ ಓದುತ್ತಿದ್ದ.. ಆದರೆ ಎಷ್ಟೇ ಪ್ರಯತ್ನಿಸಿದರೂ ಕೆಲಸ ಸಿಗದಿರುವುದು ಅವನನ್ನು ತುಂಬಾ ಖಿನ್ನನಾಗಿಸಿತ್ತು.
ಅಲ್ಲದೇ ತನ್ನ ರೂಂನಲ್ಲಿ ನಿರಂತರವಾಗಿ ಓದುತ್ತಿದ್ದ. ಆದರೂ ತಾನು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ ಎಂದು ಮನ ನೊಂದಿದ್ದ. ಅಲ್ಲದೇ, ಎಷ್ಟೇ ಪ್ರಯತ್ನ ಪಟ್ಟರೂ ಕೆಲಸ ಸಿಗುತ್ತಿಲ್ಲ ಎಂದು ಸ್ನೇಹಿತರ ಬಳಿ ಆಗಾಗ ಬೇಸರ ತೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.




