Ad imageAd image

ಪ್ರೇಮಿಗಳಿಗೆ ಸಹಕರಿಸಿದಕ್ಕೆ ಇಬ್ಬರ ಬರ್ಬರ ಹತ್ಯೆ 

Bharath Vaibhav
ಪ್ರೇಮಿಗಳಿಗೆ ಸಹಕರಿಸಿದಕ್ಕೆ ಇಬ್ಬರ ಬರ್ಬರ ಹತ್ಯೆ 
WhatsApp Group Join Now
Telegram Group Join Now

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು, ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.

ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನ ಯುವತಿಯ ಸಹೋದರ ಹಾಗೂ ಹಾಗೂ ಆತನ ಸ್ನೇಹಿತರು ಹತ್ಯೆ ಮಾಡಿದ್ದಾರೆ.

ಹತ್ಯೆಯಾದ ಯುವಕರನ್ನ ಕಿರಣ್ (25) ಮಂಜುನಾಥ್ (45) ಎಂದು ಗುರುತಿಸಲಾಗಿದೆ. ಮನೆ ಬಿಟ್ಟು ಬಂದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಹುಡುಗನ ಸ್ನೇಹಿತರ ಮೇಲೆ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ದಾಳಿ ಮಾಡಿದ್ದಾರೆ.

ಚಾಕುವಿನಿಂದ ಇರಿದು ಇಬ್ಬರನ್ನ ಹತ್ಯೆ ಮಾಡಿದ್ದಾರೆ. ಓಡಿ ಹೋದ ಹುಡುಗ-ಹುಡುಗಿಗೆ ಇಬ್ಬರು ಬೆಂಬಲ ನೀಡಿದ್ದಾರೆಂದು ದಾಳಿ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!