ಹೈದರಾಬಾದ್: ಕೆಜಿಎಫ್ ಚಾಪ್ಟರ್ 2 ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಆಕಸ್ಮಿಕವಾಗಿ ಲಿಫ್ಟ್ನಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಕೀರ್ತನ್ ನಾಡಗೌಡ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ಅವರ ಪುತ್ರ ನಾಲ್ಕೂವರೆ ವರ್ಷದ ಚಿರಂಜೀವಿ ಸೋನಾರ್ಷ್ ಕೆ.ನಾಡಗೌಡ ಲಿಫ್ಟ್ನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಪುತ್ರನನ್ನು ಕಳೆದುಕೊಂಡ ನಿರ್ದೇಶಕರ ಕುಟುಂಬ ತೀವ್ರ ದುಃಖದಲ್ಲಿದೆ. ಈ ವಿಷಯ ತಿಳಿದ ನಂತರ, ಅನೇಕ ಚಲನಚಿತ್ರ ಮತ್ತು ರಾಜಕೀಯ ವ್ಯಕ್ತಿಗಳು ಕೀರ್ತನ್ ನಾಡಗೌಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.




