Ad imageAd image

ಡಿಸಿಎಂ ಆಪ್ತ ಕಾರ್ಯದರ್ಶಿ ಕಾರು ಡಿಕ್ಕಿ : ಹೆಬ್ಬಾಳಕರ್ ಒಡೆತನದ ಸಕ್ಕರೆ ಕಾರ್ಖಾನೆ ಉದ್ಯೋಗಿ ಸಾವು 

Bharath Vaibhav
ಡಿಸಿಎಂ ಆಪ್ತ ಕಾರ್ಯದರ್ಶಿ ಕಾರು ಡಿಕ್ಕಿ : ಹೆಬ್ಬಾಳಕರ್ ಒಡೆತನದ ಸಕ್ಕರೆ ಕಾರ್ಖಾನೆ ಉದ್ಯೋಗಿ ಸಾವು 
WhatsApp Group Join Now
Telegram Group Join Now

ಬೆಳಗಾವಿ : ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಮಂಜುನಾಥ್ ತಲೆ ಭಾಗಕ್ಕೆ ಗಂಭೀರಗಾಯ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷ ಸಕ್ಕರೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಂಜುನಾಥ್ ಕೆಲಸಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿ ದುರಂತ ಅಂತ್ಯ ಕಂಡಿದ್ದಾರೆ.

ಇನ್ನು, ಅಪಘಾತದ ರಭಸಕ್ಕೆ ರಾಜೇಂದ್ರ ಪ್ರಸಾದ್ ಅವರ ಕಾರು ಕೂಡಾ ಪಲ್ಟಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಹಿರಿಯ ಅಧಿಕಾರಿ ರಾಜೇಂದ್ರ ಪ್ರಸಾದ್ ಮತ್ತು ಕಾರು ಚಾಲಕನನ್ನು ಧಾರವಾಡ ಶಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!