ಹುಬ್ಬಳ್ಳಿ: ಬೈಕ್ ಅಪಘಾತದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮಂಜುನಾಥ್ ಹೂಗಾರ್ (45) ಮೃತ ಕಾರು ಚಾಲಕ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಮೂಲದ ಮಂಜುನಾಥ್ ನಿನ್ನೆ ರಾತ್ರಿ ಬೈಕ್ ನಲ್ಲಿ ತಮ್ಮ ಗ್ರಾಮಕ್ಕೆ ಹೋಗುತ್ತಿದರು.
ಈ ವೇಳೆ ಬೈಕ್ ಸ್ಕಿಡ್ ಆಗಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಮಂಜುನಾಥ್ ಹೂಗಾರ್ ಕೊನೆಯುಸಿರೆಳೆದಿದ್ದಾರೆ.
ತಮ್ಮ ಕಾರು ಚಾಲಕ ಮಂಜುನಾಥ್ ಅಗಲಿಕೆಗೆ ಶಾಸಕ ಮಹೇಶ್ ಟೆಂಗಿನ ಕಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




