Ad imageAd image

ದಲಿತರು ಪ್ರೀತಿನೇ ಮಾಡಬಾರದಾ : ಪ್ರಮೋದ್ ಮುತಾಲಿಕ್ 

Bharath Vaibhav
ದಲಿತರು ಪ್ರೀತಿನೇ ಮಾಡಬಾರದಾ : ಪ್ರಮೋದ್ ಮುತಾಲಿಕ್ 
WhatsApp Group Join Now
Telegram Group Join Now

ಹುಬ್ಬಳ್ಳಿ : ಮರ್ಯಾದಾ ಹತ್ಯೆ ಮಾಡಿದ ತಂದೆಯನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ.

ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುತಾಲಿಕ್‌ ವಿರೋಧ ವ್ಯಕ್ತಪಡಿಸಿದರು.

ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡೆದವರಿಗೆ ಹೃದಯವಿಲ್ಲ, ರಾಕ್ಷಸರು ಅವರು. ಸರ್ಕಾರ ಕೂಡಾ ಈ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸ್ವಂತ ಮಗಳು ಗರ್ಭಿಣಿಯಾದ್ರು ತಂದೆ ಕೊಲೆ ಮಾಡಿದ್ದಾನೆ. ಗರ್ಭಿಣಿ ಹೊಟ್ಟೆಗೆ ಕೊಡಲಿ ಹಾಕಿರೋನು ರಾಕ್ಷಸ. ಅವರನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು. ದಲಿತರು ಪ್ರೀತಿನೇ ಮಾಡಬಾರದಾ? ಇಂತಹ ಘಟನೆ ಎಂದಿಗೂ ಆಗದಂತಹ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!