ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಆಘಾತವಾಗಿದೆ.
ಈ ವರ್ಷದ ಕೊನೆಯಲ್ಲಿ ವಿನಯ್ ಕುಲಕರ್ಣಿಯು ತಮಗೆ ಜಾಮೀನು ಸಿಗುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಆದರೆ ಕೋರ್ಟ್ ಮುಂದೂಡಿದೆ. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಹೈಕೋರ್ಟ್, ಮುಂದಿನ ವರ್ಷಕ್ಕೆ ಅಂದರೆ 2026ರ ಜನವರಿ 5ಕ್ಕೆ ಮುಂದೂಡಿ ಆದೇಶಿಸಿದೆ.




