ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಸಿಎಂ ಆಗೋ ಕನಸಿನಲ್ಲಿದ್ದಂತ ಡಿಕೆ ಶಿವಕುಮಾರ್ ಅವರಿಗೆ, ಸಿದ್ಧರಾಮಯ್ಯ ತಾನಾಗಿಯೇ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರವೇ ಅದು ಸಾಧ್ಯವಾಗಲಿದೆ. ಇಲ್ಲ ಅಂದರೇ ಡಿಕೆಶಿಗೆ ಅಧಿಕಾರ ಸಿಗೋದಿಲ್ಲ ಎಂಬುದಾಗಿ ಮಾರ್ಮಿಕವಾಗಿ ನುಡಿದಿದ್ದಾರೆ.




