ಸೇಡಂ: ತಾಲೂಕಿನ ಮೇದಕ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿತರಿಸಲಾದ ಬಿಸಿ ಊಟದಲ್ಲಿ ಹುಳ ಹಾಗೂ ಕಲ್ಲು ಪತ್ತೆಯಾಗಿರುವುದು ಅತ್ಯಂತ ಗಂಭೀರ ವಿಷಯವಾಗಿದೆ.
ಈ ಅವ್ಯವಸ್ಥಿತ ಆಹಾರ ಸೇವನೆಯಿಂದ ಅನೇಕ ವಿದ್ಯಾರ್ಥಿಗಳಿಗೆ ವಾಂತಿ ಸೇರಿದಂತೆ ವಿವಿಧ ಆರೋಗ್ಯ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ.
ಈ ಕುರಿತು ಊರಿನ ಸಾರ್ವಜನಿಕರು ಶಾಲೆಯ ಮುಖ್ಯಗುರುಗಳ ಗಮನಕ್ಕೆ ತಂದಿದ್ದರೂ, ಯಾವುದೇ ರೀತಿಯ ಸ್ಪಂದನೆ ಅಥವಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ.
ಇದು ಮಕ್ಕಳ ಜೀವ ಮತ್ತು ಆರೋಗ್ಯದ ಮೇಲೆ ಆಟವಾಡುವಂತಾಗಿದೆ.
ಆದ್ದರಿಂದ, ಈ ವಿಷಯ ಕುರಿತು ತಕ್ಷಣವೇ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಹಾಗೂ ಹೊಣೆಗಾರ ಸಿಬ್ಬಂದಿಯ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ಯುವ ಸೇನೆ ವಲಯ ಅಧ್ಯಕ್ಷರಾದ ನರೇಶ್ ಏ ನಾಟಿಕರ್ ಅವರು ಬಲವಾಗಿ ಆಗ್ರಹಿಸುತ್ತೇವೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿದ್ದಾರೆ.
ಒಂದು ವೇಳೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ, ಶಾಲೆಯನ್ನು ಮುಚ್ಚಿ ಸಾರ್ವಜನಿಕರೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಲಾಗುತ್ತದೆ ಎಂದು ಹೇಳಿದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




