ಅರಸೀಕೆರೆ:- ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ನಗರದಲ್ಲಿ ಇಂದು ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರಾದ ಡಾ. ಬಿ,ಹೆಚ್ ಜಮಾದಾರ್ ಅವರ ನೇತೃತ್ವದಲ್ಲಿ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು.

ಹಾಗೂ ಈ ಸೇವೆಯ ಸದ್ದುಪಯೋಗವನ್ನು ಬಾಣವಾರದ ಸುತ್ತಮುತ್ತಲಿನ ಜನರು ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ರಾಜ್ಯ ಹಾಗೂ ಜಿಲ್ಲೆ ತಾಲೂಕು ನಗರಗಳಲ್ಲಿ ಇನ್ನು ವಿವಿಧಡೆ ಇದೆ ರೀತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ನಮ್ಮ ಸಂಸ್ಥೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಸಂಸ್ಥೆ ಯುವ ಘಟಕ ರಾಜ್ಯಾಧ್ಯಕ್ಷರು, ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳು, ಹಾಗೂ ರಾಜ್ಯ ಪದಾಧಿಕಾರಿಗಳು, ಚಿಕ್ಕಮಂಗಳೂರು ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಹಾಸನ ಜಿಲ್ಲೆಯ, ಜಿಲ್ಲಾ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸೇವೆಯ ಬಗ್ಗೆ ಜನರು ಶ್ಲಾಘನೀಯ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಇಂಥ ಸಂಘಟನೆಗಳು ಬಹಳ ಅಪರೂಪ ಹಾಗೂ ಎಲ್ಲಾ ಜನರಿಗೂ ಕೂಡ ಇದರ ಸದ್ದುಪಯೋಗ ಆಗುತ್ತೆ ಎಂದು ಹರ್ಷವನ್ನು ವ್ಯಕ್ತಪಡಿಸಿದರು.
ವರದಿ ;-ಮಂಜುನಾಥ್ ಕಲಾದಗಿ.




