ಕೋಲ್ಕತ್ತ: ಮುಂಬರುವ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಕರ್ಯತಂತ್ರ ರೂಪಿಸುತ್ತಿದ್ದು, ಬಿಜೆಪಿ ಪ್ರಚಂಡ ಬಹುಮತ ಸಾಧಿಸಲಿದೆ. ಮಮತಾ ಸರಕಾರ ಪತನವಾಗುವುದು ನಿಶ್ಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಷಾ ಅವರು ಬಿಜೆಪಿ ಕರ್ಯಕತ್ರನ್ನು ಉದ್ದೇಶಿಸಿ ಮಾತನಾಡಿದರು. ಮಮತಾ ಸರಕಾರ ಪಶ್ಚಿಮ ಬಂಗಾಳದಲ್ಲಿ ನುಸುಳುಕೊರರಿಗೆ ಆಶ್ರಯ ನೀಡುತ್ತಿದೆ ಎಂದು ಆರೋಪಿಸಿದ ಅವರು ಮುಂಬರಯವ ಚುನಾವಣೆಯಲ್ಲಿ ಬಿಜೆಪಿ ಶೇ. ೫೦ ಕ್ಕಿಂತ ಹೆಚ್ಚು ಮತ ಪಡೆಯಲಿದೆ. ಪ್ರಚಂಡ ಬಹುಮತ ಸಾಧಿಸಲಿದೆ ಎಂದು ಭವಿಷ್ಯ ನುಡಿದರು.
ಸಂಸತ್ತಿನಲ್ಲಿ ವಂದೇ ಮಾತರಂ ಮೇಲಿನ ರ್ಚೆಗೆ ಆಕ್ಷೇಪ ವ್ಯಕ್ತಪಡಿಸುವುದು ಬಂಗಾಳದ ಅಸ್ಮೀತೆಯನ್ನು ವಿರೋಧಿಸಿದಂತೆ ಎಂದು ಷಾ ನುಡಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಜಯ: ಅಮಿತ್ ಷಾ




